ಬಿಜೆಪಿ ಮುಖಂಡ ದಯಾಶಂಕರ್ ಬಿಎಸ್ಪಿ ಅಧಿನಾಯಕಿ ಮಾಯಾವತಿ ವಿರುದ್ಧ ಹೇಳಿಕೆ ನೀಡಿದ ನಂತರ ಉಂಟಾಗಿರುವ ಗೊಂದಲದ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಬಿಜೆಪಿ ಮತ್ತು ಬಿಎಸ್ಪಿ ಪಕ್ಷಗಳ ಮಧ್ಯೆ ಯಾರು ಹೆಚ್ಚು ಅಸಭ್ಯ ಪದಗಳನ್ನು ಬಳುಸುತ್ತಾರೋ ಎನ್ನುವ ಬಗ್ಗೆ ಸ್ಪರ್ಧೆ ನಡೆಯುತ್ತಿದೆ ಎಂದು ಲೇವಡಿ ಮಾಡಿದ್ದಾರೆ.