ಭಾಗಪತ್ ಪ್ರಾಂತ್ಯದ ಗ್ರಾಮ ಪಂಚಾಯಿತಿ ಸದಸ್ಯರು ಮಾತನಾಡಿ, ಇಂತಹ ಯಾವುದೇ ಆದೇಶ ಹೊರಡಿಸಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಇಬ್ಬರು ದಲಿತ ಸಹೋದರಿಯರ ಕುಟುಂಬಗಳು ಕೂಡಾ ಅಂತಹ ಆದೇಶ ಹೊರಡಿಸಿಲ್ಲ ಎಂದು ಹೇಳಿದ್ದಾರೆ. ಸ್ಥಳೀಯ ಪೊಲೀಸರು ಕೂಡಾ ಆರೋಪಗಳನ್ನು ತಳ್ಳಿಹಾಕಿದ್ದಾರೆ.
ಸಹೋದರರು ಮೇಲ್ಜಾತಿ ಮಹಿಳೆಯೊಂದಿಗೆ ಪರಾರಿಯಾಗಿದ್ದಕ್ಕಾಗಿ ದಂಡದ ರೂಪದಲ್ಲಿ ಅವರ ಸಹೋದರಿಯರಾದ ಮೀನಾಕ್ಷಿ ಕುಮಾರಿ ಮತ್ತು ಆಕೆಯ ಕಿರಿಯ ಸಹೋದರಿಯನ್ನು ಬೆತ್ತಲೆಗೊಳಿಸಿ ಗ್ರಾಮದ ತುಂಬಾ ಮೆರವಣಿಗೆ ಮಾಡಿಸಿ, ಮುಖಕ್ಕೆ ಕಪ್ಪು ಮಸಿ ಬಳೆದು ನಂತರ ರೇಪ್ ಮಾಡಲಾಗುವುದು ಎನ್ನುವ ಮಾಹಿತಿ ಗ್ರಾಮಸ್ಥರಿಂದ ತಿಳಿದ ಸಹೋದರಿಯರು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.