ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ನ್ಯಾಯಾಲಯ, ಪ್ರಕರಣದ ಆರೋಪಿಗಳಾದ ಮೆಹಬೂಬ್ ನಗರ ಜಿಲ್ಲೆಯ ಕೊಡಂಗಾಲ್ ವಿಧಾನಸಭಾ ಕ್ಷೇತ್ರದ ಶಾಸಕ ಎ.ರೇವಂತ್ ರೆಡ್ಡಿ ಹಾಗೂ ಇತರೆ ಇಬ್ಬರು ಆರೋಪಿ ಶಾಸಕರುಗಳಾದ ಉದಯ್ ಸಿಂಹ ಮತ್ತು ಸೆಬಾಸ್ಟಿಯನ್ ಹ್ಯಾರಿ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿದ್ದ ತೆಲಂಗಾಣ ಭ್ರಷ್ಟಾಚಾರ ದಳದ ಪೊಲೀಸರು, ಮೂವರೂ ಆರೋಪಿಗಳನ್ನು ಮೇ 31ರಂದು ಬಂಧಿಸಿದ್ದರು. ಬಳಿಕ ಪ್ರಕರಣದ ವಿಚಾರಣೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮೂವರೂ ಆರೋಪಿಗಳನ್ನೂ ಕೂಡ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಇಂದು ಜಾಮೀನು ಮಂಜೂರು ಮಾಡಲಾಗಿದೆ.