ಸಂದೇಶ್ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್ ಶೇಖ್ಗೆ ಶಾಕ್
ಈ ಪ್ರಕರಣವನ್ನು ಪಶ್ಚಿಮ ಬಂಗಾಳ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಸಂತ್ರಸ್ತರ ಕುಟುಂಬಗಳು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಕಲ್ಕತ್ತಾ ಹೈಕೋರ್ಟ್ಗೆ ಮನವಿ ಮಾಡಿದ್ದವು. ಇದು ಗಂಭೀರ ಪ್ರಕರಣವಾಗಿದ್ದು ತನಿಖೆಯನ್ನು ಸಿಬಿಐಗೆ ವಹಿಸಿಬೇಕು ಎಂದು ಕಲ್ಕತ್ತಾ ಹೈಕೋರ್ಟ್ ಜೂನ್ 30ರಂದು ಸರ್ಕಾರಕ್ಕೆ ಸೂಚನೆ ನೀಡಿತ್ತು.
ಸಂದೇಶ್ಖಾಲಿ ಭೂವ್ಯವಹಾರಕ್ಕೆ ಸಂಬಂಧಿಸಿದಂತೆ ಶೇಖ್ನನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2024ರ ಜನವರಿ 5ರಂದು ಬಂಧಿಸಿದ್ದರು. ಸದ್ಯ ಶೇಖ್ ನ್ಯಾಯಾಂಗ ಬಂಧನದಲ್ಲಿದ್ದಾರೆ.