ಕೇಂದ್ರ ಸರ್ಕಾರ ರೈತರ ಅರ್ಧ ಸಾಲ ಮನ್ನಾ ಮಾಡಲಿ: ಸಿಎಂ ಸಿದ್ದರಾಮಯ್ಯ

ಗುರುವಾರ, 16 ಫೆಬ್ರವರಿ 2017 (13:45 IST)
ಕೇಂದ್ರ ಸರ್ಕಾರ ರೈತರ ಅರ್ಧ ಸಾಲ ಮನ್ನಾ ಮಾಡಿದಲ್ಲಿ ರಾಜ್ಯ ಸರಕಾರ ಕೂಡಾ ರೈತರ ಅರ್ಧ ಸಾಲ ಮನ್ನಾ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ರೈತರೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಕುಡಿಯುವ ನೀರು, ಮೇವಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು ಎಂದು ಅಧಿಕಾರಿಗಳಿಗೆ ಕಟ್ಟಾಜ್ಞೆ ಹೊರಡಿಸಿದ್ದಾರೆ.
 
ರಾಜ್ಯ ಸರಕಾರ ರೈತರ ಪರವಾಗಿದ್ದು ರೈತರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು. ರೈತರ ಬಗ್ಗೆ ಹೇಳಿಕೆ ನೀಡುವ ಪ್ರಧಾನಿ ಮೋದಿ ಸರಕಾರಕ್ಕೆ ನಿಜವಾದ ರೈತರ ಕಳಕಳಿಯಿದ್ದಲ್ಲಿ ರೈತರ ಸಾಲ ಮನ್ನಾ ಮಾಡಲಿ ಎಂದು ಸವಾಲ್ ಹಾಕಿದರು.
 
ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲು ಸರಕಾರ ಬದ್ಧವಾಗಿದೆ. ಚುನಾವಣಾ ವೇಳೆಯಲ್ಲಿ ನುಡಿದಂತೆ ನಡೆದ ಪಾರದರ್ಶಕ ಸರಕಾರ ನಮ್ಮದು ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ