ಮುಸ್ಲಿಂ ಪುರುಷರನ್ನು ಶಿಕ್ಷಿಸಲು ಹೊರಟಿರುವ ಕೇಂದ್ರ– ಓವೈಸಿ

ಮಂಗಳವಾರ, 23 ಜನವರಿ 2018 (20:41 IST)
ತ್ರಿವಳಿ ತಲಾಖ್ ಕಾನೂನಿಂದ ಮುಸ್ಲಿಂ ಪುರುಷರನ್ನು ಶಿಕ್ಷಿಸಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತ್ರಿವಳಿ ತಲಾಖ್‌ ವಿಷಯದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತ್ರಿವಳಿ ತಲಾಖ್ ನೀಡುವವರನ್ನು ಸಾಮಾಜಿಕವಾಗಿ ಬಹಿಷ್ಕಾರ ಹಾಕಬೇಕು ಎಂದ ಅವರು ಮುಸ್ಲಿಂ ಮಹಿಳೆಯರ ಸಬಲೀಕರಣಕ್ಕಾಗಿ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಎರಡು ಸಾವಿರ ಕೋಟಿ ಮೀಸಲಿಡಬೇಕು ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ