ದೆಹಲಿಯಲ್ಲಿ ಚುನಾವಣೆ ಮುಗಿದ ಬಳಿಕ ಎಸ್ಐಟಿ ರಚನೆಯ ಬಗ್ಗೆ ಅಧಿಕೃತ ಪ್ರಕಟಣೆ ಹೊರಬೀಳಲಿದ್ದು, ಮುಂದಿನ ಮೂರು ದಿನಗಳಲ್ಲಿ ತಂಡದ ಸದಸ್ಯರ ಹೆಸರು ಪ್ರಕಟಿಸಲಾಗುತ್ತದೆ. ನಿವೃತ್ತ ನ್ಯಾಯಾಧೀಶ ಜಿ.ಪಿ. ಮಾಥುರ್ ನೇಮಿಸಿದ ಸಮಿತಿಯು ಸಲ್ಲಿಸಿದ ವರದಿಯಲ್ಲಿ ಸಿಖ್ ವಿರೋಧಿ ಗಲಭೆಯಲ್ಲಿ 225 ಪ್ರಕರಣಗಳ ಮರುಪರಿಶೀಲನೆ ಅಗತ್ಯವಾಗಿದೆ ಎಂದು ತಿಳಿಸಿದೆ.
ಅನೇಕ ಪ್ರಕರಣಗಳಲ್ಲಿ ನಿರ್ಣಾಯಕ ಸಾಕ್ಷ್ಯವನ್ನು ಕಡೆಗಣಿಸಲಾಗಿದ್ದು, ಹೊಸ ತನಿಖೆ ನಡೆಸಬೇಕು ಎಂದು ವರದಿಯಲ್ಲಿ ಸೂಚಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ಸಾಕ್ಷ್ಯಗಳು ಇದ್ದರೂ ಪೊಲೀಸರು ಆರೋಪಪಟ್ಟಿಗಳನ್ನು ಸಲ್ಲಿಸದೇ ಪ್ರಕರಣಗಳನ್ನು ಮುಚ್ಚಿಹಾಕಿದೆ.