ಸಾವು ಎಂದರೆ ಏನು ಎಂದು ತಿಳಿಯದ ವಯಸ್ಸಲ್ಲಿ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಇತ್ತೀಚಿಗೆ ಹೆಚ್ಚೆಚ್ಚು ಕೇಳಿ ಬರುತ್ತಿವೆ. ಇಂತಹದೇ ಘಟನೆಯೊಂದು ನಗರದಲ್ಲಿ ನಡೆದಿದೆ. ಹೋಮ್ ವರ್ಕ್ ಮಾಡಿಲ್ಲವೆಂದು ಪೋಷಕರು ಗದರಿಸಿದ್ದಕ್ಕೆ 12 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಚಂದ್ರಾ ಲೇ ಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.