ಹೋಮ್ ವರ್ಕ್ ಮಾಡು ಎಂದಿದ್ದಕ್ಕೆ ಆತ್ಮಹತ್ಯೆ

ಶನಿವಾರ, 27 ಫೆಬ್ರವರಿ 2016 (12:22 IST)
ಸಾವು ಎಂದರೆ ಏನು ಎಂದು ತಿಳಿಯದ ವಯಸ್ಸಲ್ಲಿ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಇತ್ತೀಚಿಗೆ ಹೆಚ್ಚೆಚ್ಚು ಕೇಳಿ ಬರುತ್ತಿವೆ. ಇಂತಹದೇ ಘಟನೆಯೊಂದು ನಗರದಲ್ಲಿ ನಡೆದಿದೆ. ಹೋಮ್ ವರ್ಕ್ ಮಾಡಿಲ್ಲವೆಂದು ಪೋಷಕರು ಗದರಿಸಿದ್ದಕ್ಕೆ 12 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಚಂದ್ರಾ ಲೇ ಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಮೃತ ಬಾಲಕ ಸತೀಶ್‌ನಿಗೆ ಪೋಷಕರು ಹೋಮ್ ವರ್ಕ್ ಮಾಡು ಎಂದು ಬೈದಿದ್ದರು. ಇದರಿಂದ ನೊಂದ ಬಾಲಕ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.  
 
ಮಗನ ಸಾವಿನ ನಡುವೆಯೂ ಉದಾತ್ತತೆ ಮೆರೆದಿರುವ ಪೋಷಕರು ಆತನ ಕಣ್ಣುಗಳನ್ನು ಲಯನ್ಸ್ ಆಸ್ಪತ್ರೆಗೆ ದಾನ ಮಾಡಿದ್ದಾರೆ. 
 
ಚಂದ್ರಾ ಲೇ ಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ವೆಬ್ದುನಿಯಾವನ್ನು ಓದಿ