ಚೀನಾ –ಭಾರತ ಸಂಘರ್ಷ ಖಂಡಿಸಿ ಪ್ರತಿಭಟನೆ; ಟ್ರೋಲ್ ಗೆ ಒಳಗಾದ ಪಶ್ಚಿಮ ಬಂಗಾಳದ ಬಿಜೆಪಿ ಕಾರ್ಯಕರ್ತರು

ಶನಿವಾರ, 20 ಜೂನ್ 2020 (08:46 IST)
ಕೋಲ್ಕತ್ತಾ: ಚೀನಾ –ಭಾರತ ಸಂಘರ್ಷವನ್ನು ಖಂಡಿಸಿ ಪಶ್ಚಿಮ ಬಂಗಾಳದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಇದೀಗ ಟ್ರೋಲ್ ಗೆ ಒಳಗಾಗಿದ್ದಾರೆ.

ಚೀನಾ –ಭಾರತ ಸಂಘರ್ಷದಲ್ಲಿ ಭಾರತ ಸೇನೆಯ 20 ಸೈನಿಕರು ಹುತಾತ್ಮರಾಗಿದ್ದರು. ಇದನ್ನು ಖಂಡಿಸಿ ಪಶ್ಚಿಮ ಬಂಗಾಳದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಚನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರ ಪ್ರತಿಮೆಯನ್ನು ಸುಟ್ಟು ಹಾಕುವ ಬದಲು ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ಪ್ರತಿಮೆಯನ್ನು ಸುಟ್ಟು ಹಾಕಿದ್ದಾರೆ.ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಬಿಜೆಪಿ ಕಾರ್ಯಕರ್ತರನ್ನು ಟ್ರೋಲ್ ಮಾಡುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ