ಮೇ 20ರ ವರೆಗೆ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜೈಲೇ ಗತಿ

Sampriya

ಮಂಗಳವಾರ, 7 ಮೇ 2024 (17:04 IST)
ನವದೆಹಲಿ:  ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಯಾಗಿರುವ  ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ 20 ವಿಸ್ತರಿಸಿದೆ.

ಈ ಹಿಂದೆ ನೀಡಲಾಗಿದ್ದ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಹಾಗೂ ಸಹ ಆರೋಪಿ ಚನ್‌ಪ್ರೀತ್ ಸಿಂಗ್‌ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.

ಅದಲ್ಲದೆ ಸಿಬಿಐ ಮತ್ತು ಇಡಿ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಸಹ ಆರೋಪಿ ಚನ್‌ಪ್ರೀತ್ ಸಿಂಗ್ ಅವರ ನ್ಯಾಯಾಂಗ ಬಂಧನವನ್ನು ಮೇ 20 ರವರೆಗೆ ವಿಸ್ತರಿಸಿ ಆದೇಶನ ಹೊರಡಿಸಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ