ಸೋನಿಯಾ ಗಾಂಧಿಗೂ ಬೇಡವಾದ್ರು ಸಿಎಂ ಕೇಜ್ರಿವಾಲ್

ಗುರುವಾರ, 25 ಮೇ 2017 (10:23 IST)
ನವದೆಹಲಿ: ರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮಿತ್ರ ಪಕ್ಷಗಳ ನಾಯಕರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಆದರೆ ಎಎಪಿ ನಾಯಕ ದೆಹಲಿ ಸಿಎಂ ಕೇಜ್ರಿವಾಲ್ ಗೆ ಆಹ್ವಾನವಿತ್ತಿಲ್ಲ.

 
ಔತಣಕೂಟದಲ್ಲಿ ವಿರೋಧ ಪಕ್ಷದ ನಾಯಕರು ರಾಷ್ಟ್ರಪತಿಗೆ ತಮ್ಮ ಪರ ಅಭ್ಯರ್ಥಿಯನ್ನು ಒಮ್ಮತದಿಂದ ಘೋಷಿಸುವ ಸಾಧ್ಯತೆಯಿದೆ. ವಿರೋಧ ಪಕ್ಷದ ಸದಸ್ಯರು ಒಟ್ಟು ಸೇರಿ ಆಡಳಿತಾರೂಢ ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ ಚುರುಕು ಮುಟ್ಟಿಸಲಿದ್ದಾರೆ.

ಇದುವರೆಗೆ ಕೇಜ್ರಿವಾಲ್ ರ ಪಕ್ಷ ವಿರೋಧ ಪಕ್ಷದ ಬಣದೊಂದಿಗೆ ಗುರುತಿಸಿಕೊಳ್ಳದ ಕಾರಣ ಅವರಿಗೆ ಆಹ್ವಾನ ನೀಡಿಲ್ಲ ಎನ್ನಲಾಗಿದೆ. ಉಳಿದಂತೆ, ಮಮತಾ ಬ್ಯಾನರ್ಜಿ,  ಡಿಎಂಕೆ, ಸಿಪಿಎಂ, ಆರ್ ಜೆಡಿ,  ಜೆಡಿಯು, ಎನ್ ಸಿಪಿಯಂತಹ ಯುಪಿಎ ಒಕ್ಕೂಟದ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ