ಪ್ರಧಾನಮಂತ್ರಿ ನರೇಂದ್ರ ಮೋದಿಯ ಭ್ರಷ್ಟಾಚಾರ ಮತ್ತು ನೋಟು ನಿಷೇಧ ಕುರಿತಂತೆ ಕಾಂಗ್ರೆಸ್ ಪಕ್ಷ ಮೂರು ಹಂತಗಳಲ್ಲಿ ಪ್ರತಿಭಟನೆ ನಡೆಸಲಿದ್ದು, ಅದರಂತೆ ಜನೆವರಿ 6 ರಂದು ಮೊದಲ ಹಂತದ ಪ್ರತಿಭಟನೆ ಆರಂಭಿಸಲಾಗುತ್ತಿದೆ ಎಂದು ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
ಗುಜರಾತ್ ಮಾಜಿ ಮುಖ್ಯಮಂತ್ರಿ ಸುರೇಶ್ ಮೆಹತಾ, ಕಪ್ಪು ಹಣದ ಆರೋಪಿ ಮಹೇಶ್ ಶಾಹ್, ಅಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಮೋದಿಯನ್ನು ಯಾವುದೇ ನಿರ್ಭಂಧವಿಲ್ಲದೇ ಭೇಟಿ ಮಾಡುತ್ತಿದ್ದರು ಎಂದು ಹೇಳಿಕೆ ನೀಡಿರುವುದಾಗಿ ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.