ಗಾಂಧಿ ಹತ್ಯೆಯಿಂದ ಕಾಂಗ್ರೆಸ್ ಗೆ ಲಾಭವಾಗಿದೆ: ಉಮಾ ಭಾರತಿ ವಿವಾದಾತ್ಮಕ ಹೇಳಿಕೆ

ಶುಕ್ರವಾರ, 13 ಅಕ್ಟೋಬರ್ 2017 (10:05 IST)
ನವದೆಹಲಿ: ಮಹಾತ್ಮ ಗಾಂಧಿ ಹತ್ಯೆಯಿಂದ ಕಾಂಗ್ರೆಸ್​ ಗೆ ಲಾಭವಾಗಿದೆ. ಸ್ವಾತಂತ್ರ್ಯ ನಂತರ ಕಾಂಗ್ರೆಸ್​ ​ಪಕ್ಷ ವಿಸರ್ಜನೆ ಮಾಡಬೇಕು ಎಂದಿದ್ದರು ಎಂದು ಕೇಂದ್ರ ಸಚಿವೆ ಉಮಾ ಭಾರತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಗೋಡ್ಸೆ ಗಾಂಧಿಯವರನ್ನು ಕೊಂದಿರಬಹುದು. ಆದರೆ ಅವರ ಹತ್ಯೆಯಿಂದ ಯಾರಿಗೆ ಲಾಭವಾಗಿದೆ ಮತ್ತು ಹತ್ಯೆಗೆ ಪ್ರಚೋದನೆ ನೀಡಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.

ಜ. 30 1948ರಲ್ಲಿ ಆದ ಮಹಾತ್ಮ ಗಾಂಧಿ ಹತ್ಯೆಯಿಂದ ಜನಸಂಘಕ್ಕೆ ಸಾಕಷ್ಟು ಹಾನಿಯಾಗಿದೆ. ದೇಶ ಒಬ್ಬ ಮಹಾತ್ಮನನ್ನು ಕಳೆದುಕೊಂಡಿದೆ. ಇದರಿಂದ ಲಾಭ ಪಡೆದಿದ್ದು ಕಾಂಗ್ರೆಸ್ ಎಂದು ಉಮಾ ಭಾರತಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ