ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ

ಶನಿವಾರ, 10 ಏಪ್ರಿಲ್ 2021 (12:09 IST)
ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಮತ್ತೆ ಲಾಕ್ ಡೌನ್ ಮಾಡುವಂತಹ ಪರಿಸ್ಥಿತಿ ಎದುರಾಗಿದೆ. ಇದರಿಂದ ಜನರು ಮತ್ತೆ ಪರದಾಡುವ ಪರಿಸ್ಥಿತಿ ಬರಲಿದೆ.

ಈ ಹಿನ್ನಲೆಯಲ್ಲಿ  ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ವಲಸೆ ಕಾರ್ಮಿಕರು ಮತ್ತೆ ಪಲಾಯನ ಮಾಡಬೇಕಾಗುತ್ತದೆ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಲಸಿಕೆ ನೀಡುವುದರ ಜೊತೆಗೆ ಜನತೆಗೆ ಹಣವನ್ನು ಕೊಡಬೇಕು. ಸಾಮಾನ್ಯ ಜನರ ಜೀವನ , ದೇಶದ ಆರ್ಥಿಕತೆಗಾಗಿ ಅವಶ್ಯಕ. ಅಹಂಕಾರಿ ಸರ್ಕಾರ ಉತ್ತಮ ಸಲಹೆ ಕೇಳುವ ಸ್ಥಿತಿಯಲ್ಲಿಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ