ಸತತ ಸೋಲುಗಳ ಚಕ್ರದಡಿಯಲ್ಲಿ ಕಾಂಗ್ರೆಸ್ ತತ್ತರಿಸುತ್ತಿದ್ದು, ಅದರ ಮಧ್ಯೆ ಮಾಜಿ ಕಾನೂನು ಸಚಿವ ಹಂಸರಾಜ್ ಭಾರದ್ವಾಜ್ ಕರ್ನಾಟಕದಲ್ಲಿ ಪಕ್ಷ ಗಳಿಸಿರುವ ಅಪರೂಪದ ದಿಗ್ವಿಜಯಕ್ಕೂ ಪ್ರಶ್ನೆ ಎತ್ತಿ ಪಕ್ಷಕ್ಕೆ ಇರಿಸು ಮುರಿಸು ತಂದಿತ್ತಿದ್ದಾರೆ. ಕಾಂಗ್ರೆಸ್ ನಾಯಕರು ಬಿಜೆಪಿಯ ನಾಯಕರೊಂದಿಗೆ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ.
ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿ ಮಾತನಾಡುತ್ತಿದ್ದ ಅವರು, ರೆಡ್ಡಿ ಸಹೋದರರು ಮತ್ತು ಬಿಎಸ್ ಯಡಿಯೂರಪ್ಪನವರ ವಿರುದ್ಧ ಕ್ರಮ ಕೈಗೊಳ್ಳುವ ಆಲೋಚನೆಯನ್ನು ಕೈ ಬಿಡುವಂತೆ ಕಾಂಗ್ರೆಸ್ ನಾಯಕರು ನನಗೆ ಒತ್ತಾಯಿಸಿದ್ದರು. ಕೆಲ ಕಾಂಗ್ರೆಸ್ ನಾಯಕರು ಬಿಜೆಪಿಯೊಂದಿಗೆ ಬಹಳ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.