ಇನ್ನು ಶಭೆಯಲ್ಲಿ ಪ್ರತಿಕ್ರಿಯಿಸಿರುವ ಸೋನಿಯಾ, ಪ್ರಧಾನಿ ಮೋದಿ ಅವರ ವಿರುದ್ಧ ಹರಿಹಾಯ್ದಿದ್ದು, ರಾಷ್ಟ್ರದ ಅಭಿವೃದ್ಧಿಗಾಗಿ ನೂತನ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇನೆ ಎನ್ನುತ್ತಿರುವ ಪ್ರಧಾನಿಗಳು, ತಮ್ಮ ಪಕ್ಷದ ನಾಯಕರಿಂದ ಆಗುತ್ತಿರುವ ಭ್ರಷ್ಟಾಚಾರ ವಿಷಯಗಳ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ, ಮಹಾರಾಷ್ಟ್ರದ ಅತಿದೊಡ್ಡ ಭ್ರಷ್ಟಾಚಾರ ಹಗರಣದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್, ಲಲಿತ್ ಮೋದಿ ವಿಸಾ ಹಗರಣದಲ್ಲಿ ಭಾಗಿಯಾಗಿರುವ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಹಾಗೂ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರು ರಾಜೀನಾಮೆ ನೀಡಬೇಕು. ಅಲ್ಲಿವರೆಗೆ ತಮ್ಮ ಹೋರಾಟವನ್ನು ಸದನದಲ್ಲಿ ಮುಂದುವರಿಸಬೇಕು ಎಂದು ತಿಳಿಸಿದ ಅವರು, ನಮ್ಮ ಬೇಡಿಕೆ ಈಡೇರುವವರೆಗೆ ಸದನವನ್ನು ನಡೆಯಲು ಬಿಡುವುದಿಲ್ಲ ಎಂದರು.