ದೇಶದಲ್ಲಿ ರೈತರಿಗೆ, ದಲಿತರಿಗೆ ಹಾಗೂ ಪತ್ರಕರ್ತರಿಗೆ ಸ್ವಾತಂತ್ರ್ಯ ಇಲ್ಲದಂತಾಗಿದೆ. ದೇಶದಲ್ಲಿ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ ರಾಜಕೀಯ ಕಾರಣಗಳಿಂದಾಗಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ನಿಂತು ಹೋಗಿತ್ತು. ಈಗ ಮತ್ತೆ ಆರಂಭವಾಗಿದೆ. ಪತ್ರಿಕೆ ಪುನರಾರಂಭಗೊಳ್ಳುವ ಮೂಲಕ ದೇಶಕ್ಕೆ ಸ್ಫೂರ್ತಿ ತುಂಬುತ್ತೆ ಎಂದು ಹೇಳಿದರು.