ಉತ್ತರಾಖಂಡದ ಹರೀಶ್ ರಾವತ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಶ್ವಾಸ ಮತ ಯಾಚನೆಯಲ್ಲಿ ಬಹುಮತ ಸಾಧಿಸಿದ್ದು, ರಾಷ್ಟ್ರಪತಿ ಆಡಳಿತವನ್ನು ಶೀಘ್ರದಲ್ಲೇ ರದ್ದು ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಬುಧವಾರ ಸುಪ್ರೀಂಕೋರ್ಟ್ಗೆ ತಿಳಿಸಿರುವುದರಿಂದ ಹರೀಶ್ ರಾವತ್ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಉತ್ತರಾಖಂಡ ಆಡಳಿತ ಚುಕ್ಕಾಣಿಯನ್ನು ಕೈಗೆ ತೆಗೆದುಕೊಳ್ಳುವ ಬಯಕೆಹೊಂದಿದ್ದ ಬಿಜೆಪಿಗೆ ಮುಖಭಂಗವಾಗಿದೆ.
9 ಬಂಡಾಯ ಕಾಂಗ್ರೆಸ್ ಶಾಸಕರ ಅನರ್ಹತೆ ಹಾಗೇ ಮುಂದುವರಿಯಲಿದ್ದು, ವಿಶ್ವಾಸ ಮತ ಯಾಚನೆಯಲ್ಲಿ ಮತದಾನ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ವಿಶ್ವಾಸ ಮತದ ಗೆಲುವನ್ನು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಶ್ಲಾಘಿಸಿದ್ದಾರೆ.