ಪಿಓಕೆಯಲ್ಲಿ ಉಗ್ರರನ್ನು ಸದೆಬಡೆದ ಭಾರತೀಯ ಸೇನೆಗೆ ಕಾಂಗ್ರೆಸ್ ಬೆಂಬಲ

ಗುರುವಾರ, 29 ಸೆಪ್ಟಂಬರ್ 2016 (14:16 IST)
ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಶಿಬಿರಗಳ ಮೇಲೆ ಭಾರತೀಯ ಯೋಧರು ನಡೆಸಿದ ದಾಳಿಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. 
ನಿನ್ನೆ ರಾತ್ರಿ ಭಾರತೀಯ ಯೋಧರು ಪಾಕಿಸ್ತಾನ ಒಳಗೆ ನುಗ್ಗಿ ಆರು ಭಯೋತ್ಪಾದಕ ಅಡಗು ತಾಣಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ಭಾರತದ ಗಡಿಯಲ್ಲಿ ಯುದ್ಧದ ವಾತಾವರಣ ಸೃಷ್ಠಿಯಾಗಿದೆ. ಈ ವೇಳೆ ಪಾಕಿಸ್ತಾನ ಸೇನೆಯ ಇಬ್ಬರು ಯೋಧರು ಸೇರಿದಂತೆ 38 ಉಗ್ರರನ್ನು ಹತ್ಯೆಗೈಯಲಾಗಿದೆ. 
 
ಸೀಮಿತ ಪ್ರದೇಶದಲ್ಲಿ ದಾಳಿ ನಡೆಯುವ ಮೂಲಕ ಭಯೋತ್ಪಾದಕನ್ನು ಸಾಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ನಡುಕ ಹುಟ್ಟಿಸಿದೆ. 
 
ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಅಪ್ರಚೋದಿತ ದಾಳಿಗಳಾದರೆ ಅದಕ್ಕೆ ಸಂಪೂರ್ಣ ಬಲದೊಂದಿಗೆ ಉತ್ತರ ನೀಡಿ ಎಂದು ಸೈನಿಕರಿಗೆ ಹೇಳಿದ್ದರು. ಇದರ  ಬೆನ್ನಲ್ಲೇ ಕಳೆದ ರಾತ್ರಿ ಪಾಕಿಸ್ತಾನಿ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ