ಚುನಾವಣೆ ಭರವಸೆಗಳನ್ನು ಈಡೇರಿಸದ ಅಧಿಕಾರರೂಢ ಬಿಜೆಪಿ ಸರಕಾರದ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲು ಕಾಂಗ್ರೆಸ್ ಪಕ್ಷ ಸಿದ್ದತೆ ನಡೆಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಕ್ಯಾಸಿನೋಗಳನ್ನು ಮುಚ್ಚಿಸಲು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಿಗೆ ಕ್ಯಾಸಿನೋಗಳ ಮಾಲೀಕರೊಂದಿಗೆ ಕೈ ಜೋಡಿಸಿದೆ. ರಾಜ್ಯದಲ್ಲಿ ಗಣಿಗಾರಿಕೆ ಆರಂಭವಾಗಿಲ್ಲ.ಬೊಕ್ಕಸದ ಆದಾಯ ಕಡಿಮೆಯಾಗಿದ್ದು ಭ್ರಷ್ಟಾಚಾರ ಮತ್ತು ಪಕ್ಷಪಾತ ಹೆಚ್ಚಾಗಿದೆ ಎಂದು ಆರೋಪಿಸಿದರು.