ಹಗರಣದ ಆರೋಪಿಯಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಮೋದಿ, "ಕೇಂದ್ರ ಮಾಜಿ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಒಡೆತನದ ಕೊಚ್ಚಿ ಟಸ್ಕರ್ಸ್ ಕೇರಳ ಮಾಲೀಕತ್ವದ ವಿವಾದದಲ್ಲಿ ಅವರ ಪಾತ್ರದ ಬಗ್ಗೆ ನಾನು ಬಹಿರಂಗಪಡಿಸಿದ್ದೆ. ಅದಕ್ಕೆ ಪ್ರತೀಕಾರವಾಗಿ ಆಗ ಹಣಕಾಸು ಸಚಿವರಾಗಿದ್ದ ಪ್ರಣಬ್ ಮುಖರ್ಜಿ ನನ್ನ ವಿರುದ್ಧ ತನಿಖೆಗೆ ಆದೇಶ ನೀಡಿದ್ದರು. ತಾನು ಐಪಿಎಲ್ ಮುಖ್ಯಸ್ಥನಾಗಿದ್ದ ಸಂದರ್ಭದಲ್ಲಿ ತನ್ನ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಎತ್ತಿ ಕಟ್ಟುತ್ತಿದ್ದರು", ಎಂದು ರಾಷ್ಟ್ರಪತಿಗಳ ವಿರುದ್ಧ ಆರೋಪ ಮಾಡಿದ್ದರು.
ಜೂನ್ 23 ಮತ್ತು ಜೂನ್ 25 ರಂದು ಲಲಿತ್ ಮೋದಿ ಮಾಡಿರುವ ಟ್ವೀಟ್ಗೆ ಸಂಬಂಧಿಸಿದಂತೆ ರಾಷ್ಟ್ರಪತಿ ಭವನದಿಂದ ಶನಿವಾರ ದೂರು ದಾಖಲಾಗಿದೆ ಎಂಬುದನ್ನು ವಿಶೇಷ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ದೀಪಕ್ ಮಿಶ್ರಾ ಖಚಿತ ಪಡಿಸಿದ್ದು, ಇದನ್ನು ಆರ್ಥಿಕ ಅಪರಾಧಗಳಡಿ ಪರಿಶೀಲಿಸಲಾಗುತ್ತದೆ ಎಂದು ಹೇಳಿದ್ದಾರೆ,