ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ: ಶಬರಿಮಲೆ ಕ್ಷೇತ್ರಕ್ಕೆ ಹರಿದುಬಂದ ಭಕ್ತಸಾಗರ
ದೇವಸ್ಥಾನದಲ್ಲಿ ಭದ್ರತೆಗೆ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಮಕರ ವಿಳಕ್ಕು ಉತ್ಸವದ ಭದ್ರತೆ ಮತ್ತು ಸುಗಮ ನಿರ್ವಹಣೆಗಾಗಿ ಒಟ್ಟು 5,000 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾತ್ರಿಕರನ್ನು ನಿರ್ವಹಿಸಲು ಮತ್ತು ಧಾರ್ಮಿಕ ಕಾರ್ಯಕ್ರಮದ ಸಮಯದಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ.