ದೂರುದಾರ ವಕೀಲರಾದ ಪ್ರದೀಪ್ ದ್ವಿವೇದಿ, ಪ್ರಧಾನಿ ಮೋದಿ ವಿರುದ್ಧ ದ್ವೇಷ ಬೆಳೆಯುವಂತಹ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಿಸಿದ್ದರು.
ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಕೇಜ್ರಿವಾಲ್ ಟ್ವೀಟ್ ಮಾಡಿ, ಪ್ರಧಾನಿ ಮೋದಿಯವರ ಕುಮ್ಮಕ್ಕಿನ ಮೇರೆಗೆ ಸಿಬಿಐ ಕಾನೂನುಬಾಹಿರವಾಗಿ ಸಿಎಂ ಕಚೇರಿ ಮೇಲೆ ದಾಳಿ ನಡೆಸಿದೆ. ಪ್ರಧಾನಿಯೊಬ್ಬ ಹೇಡಿ, ಮಾನಸಿಕ ಅಸ್ವಸ್ಥ ಎಂದು ಕಿಡಿಕಾರಿದ್ದರು.