ರಾಜ್ಯಗಳಿಗೆ ಕೇಂದ್ರದಿಂದ ಪತ್ರ?

ಸೋಮವಾರ, 6 ಜೂನ್ 2022 (08:45 IST)
ನವದೆಹಲಿ: ದೇಶಾದ್ಯಂತ ಮತ್ತೆ ಕೋವಿಡ್ ಕೇಸ್ಗಳು ಹೆಚ್ಚಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಮುಂದುವರಿಸಲು ಸೂಚನೆ ನೀಡಿದೆ.

ಈ 5 ರಾಜ್ಯಗಳಲ್ಲಿ ಕರ್ನಾಟಕವೂ ಸೇರಿದೆ. ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್ ಪ್ರಕರಣಗಳ ಹಿನ್ನೆಲೆ ತಮಿಳುನಾಡು, ಕೇರಳ, ತೆಲಂಗಾಣ, ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಹೆಚ್ಚಿಸಲು ತಿಳಿಸಿದ್ದಾರೆ.

ಈ 5 ರಾಜ್ಯಗಳು ಕೇಂದ್ರಕ್ಕೆ ನೀಡುವ ಅಂಕಿ ಅಂಶಗಳ ಪ್ರಕಾರ ಕೇರಳದ 11 ಜಿಲ್ಲೆಗಳು, ತಮಿಳುನಾಡುನ 2 ಜಿಲ್ಲೆಗಳು, ಮಹಾರಾಷ್ಟ್ರದ 6 ಜಿಲ್ಲೆಗಳು, ಕರ್ನಾಟಕದ ಬೆಂಗಳೂರು ಹಾಗೂ ತೆಲಂಗಾಣದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ