ವಕೀಲರಾಗಿದ್ದ ನಾಗಭೂಷಣ (45) ಇಂದಿರಮ್ಮ (35 ) ಎಂಬುವರು ಮೃತ ಪತಿ-ಪತ್ನಿಯರಾಗಿದ್ದು, ನಸುಕಿನ ಜಾವ 4 ಗಂಟೆ ಸುಮಾರಿಗೆ ಟೀ ಮಾಡಲೆಂದು ಗ್ಯಾಸ್ ಒಲೆ ಹಚ್ಚಿದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಮೊದಲೇ ಅನಿಲ ಸೋರಿಕೆಯಾಗಿದ್ದರಿಂದ ಬೆಂಕಿ ಹೊತ್ತಿಕೊಂಡು ಇಬ್ಬರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ. ಸಮಯದಲ್ಲಿ ದಂಪತಿಗಳ ಪುತ್ರ ಮನೆಯಲ್ಲಿ ಇಲ್ಲದಿದ್ದರಿಂದ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.