ದೆಹಲಿ ಹಿಟ್ ಆ್ಯಂಡ್ ರನ್ ಪ್ರಕರಣ: ಆರೋಪಿ ಬಂಧನ

ಬುಧವಾರ, 8 ಮಾರ್ಚ್ 2017 (13:57 IST)
ದೆಹಲಿಯಲ್ಲಿ ಕಳೆದ ಭಾನುವಾರ ರಾತ್ರಿ ನಡೆದ ಗುದ್ದೋಡು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ವೃತ್ತಿಯಲ್ಲಿ ಉದ್ಯಮಿಯಾಗಿರುವ ಸವ್ನೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಆತನೀಗ ಪೊಲೀಸರ ವಶದಲ್ಲಿದ್ದಾನೆ.
 
ದೆಹಲಿಯ ಪಶ್ಚಿಮ ವಿಹಾರದಲ್ಲಿ ಭಾನುವಾರ ರಾತ್ರಿ 11ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ವೇಗವಾಗಿ ಬಂದ ಮರ್ಸಿಡಿಸ್ ಸ್ಕೂಟಿ ಸವಾರನ ಮೇಲೆ ಹರಿದು ಹೋಗಿದೆ. ಮೃತನನ್ನು ಅತುಲ್ ಅರೋರಾ ಎಂದು ಗುರುತಿಸಲಾಗಿದ್ದು, ಆತ 11 ನೇ ತರಗತಿಯಲ್ಲಿ ಓದುತ್ತಿದ್ದ. 
 
ಘಟನೆಯ ಬಳಿಕ ಅಪಘಾತ ಎಸಗಿದ್ದ ಮರ್ಸಿಡಿಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದ.
 
ಘಟನಾ ಸ್ಥಳದ ಸುತ್ತಮುತ್ತಲಿನ ಕಟ್ಟಡಗಳಲ್ಲಿ ಅಳವಡಿಸಲಾಗಿರುವ ಸಿಸಿ ಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದ  ಪೊಲೀಸರು ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. 
 
ಮರ್ಸಿಡಿಸ್ ವಾಹನದ ವೇಗವೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿತ್ತು.
 

ವೆಬ್ದುನಿಯಾವನ್ನು ಓದಿ