ಬುಧವಾರ ಸಂಸದೀಯ ಸಮಿತಿಯ ಮುಂದೆ ಹಾಜರಾಗಿದ್ದ ಉರ್ಜಿತ್ ಪಟೇಲ್, ನೋಟು ರದ್ಧತಿ ಮತ್ತು ನಂತರದ ಪರಿಣಾಮ, ಸಾಧಕ- ಬಾಧಕಗಳ ಸಂಪೂರ್ಣ ವಿವರ ನೀಡಿದರು.
8/11 ರ ನಡೆ ಬಳಿಕ ಅಸ್ತವ್ಯಸ್ತವಾಗಿರುವ ಬ್ಯಾಕಿಂಗ್ ವ್ಯವಸ್ಥೆ ಯಾವಾಗ ಸಹಜ ಸ್ಥಿತಿಗೆ ಮರಳಲಿದೆ ಎಂಬ ಸ್ಪಷ್ಟ ಮಾಹಿತಿ ಇಲ್ಲ ಎಂದು ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ, ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ ಅವರನ್ನೊಳಗೊಂಡ ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಉರ್ಜಿತ್ ಪಟೇಲ್ ಹೇಳಿದ್ದಾರೆ.