‘ಭಾರತದ ಸಂಸ್ಕೃತಿಯನ್ನು ನಾಶ ಮಾಡುವುದೇ ಬಿಜೆಪಿ ಅಜೆಂಡಾ’

ಮಂಗಳವಾರ, 17 ಅಕ್ಟೋಬರ್ 2017 (09:05 IST)
ಕೋಲ್ಕೊತ್ತಾ: ಭಾರತದ ಸಂಸ್ಕೃತಿ, ಪರಂಪರೆಯನ್ನು ನಾಶ ಮಾಡುವುದೇ ಬಿಜೆಪಿಯ ಮುಖ್ಯ ಅಜೆಂಡಾ ಎಂದು ಪಶ್ಚಿಮ ಬಂಗಾಲದ ಸಿಎಂ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

 
ತಾಜ್ ಮಹಲ್ ಬಗ್ಗೆ ಬಿಜೆಪಿ ನಾಯಕ ಸಂಗೀತ್ ಸೋಮ್ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಈ ರೀತಿ ತಿರುಗೇಟು ನೀಡಿದ್ದಾರೆ.

‘ಭಾರತದ ಭವ್ಯ ಪರಂಪರೆಯನ್ನು ನಾಶ ಮಾಡುವ ಬಿಜೆಪಿಯ ವ್ಯವಸ್ಥಿತ  ಹುನ್ನಾರವಿದು. ತಾಜ್ ಮಹಲ್ ಹೆಸರನ್ನು ಅವರು ಹೇಗೆ ಕೈ ಬಿಡಲು ಸಾಧ್ಯ? ಮುಂದೊಂದು ದಿನ ಭಾರತದ ಹೆಸರನ್ನೂ ಬದಲಾಯಿಸಿದರೂ ಅಚ್ಚರಿಯಿಲ್ಲ’ ಎಂದು ಮಮತಾ ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ