ಬ್ರಿಡ್ಜ್ ಉದ್ಘಾಟನೆಗೂ ಮುನ್ನ ಢಮಾರ್!
ಭಾನುವಾರ ಬೆಳಗ್ಗೆ ಬಿಹಾರದ ಬೇಗುಸರಾಯ್ನಲ್ಲಿ ಗಂಡಕ್ ನದಿ ಬಳಿ ನಿರ್ಮಿಸಲಾಗಿದ್ದ ಬ್ರಿಡ್ಜ್ ಮುಂಭಾಗ ಕುಸಿದು ನದಿ ಪಾಲಾಗಿದೆ.
2016ರಲ್ಲಿ ಮುಖ್ಯಮಂತ್ರಿ ನರ್ಬಾಡ್ ಯೋಜನೆಯಡಿಯಲ್ಲಿ ಈ ಬ್ರಿಡ್ಜ್ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಆ ಬಳಿಕ 2017ರಲ್ಲಿ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ ಉದ್ಘಾಟನೆಗೊಂಡಿರಲಿಲ್ಲ. ಆ ಬಳಿಕ ಕೆಲದಿನಗಳ ಹಿಂದೆ ಸೇತುವೆಯ ಮೇಲ್ಭಾಗದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಇಂದು ಬೆಳಗ್ಗೆ ಕುಸಿದು ಬಿದ್ದಿದೆ.
ಸಾಹೇಬ್ಪುರ ಕಮಲ್ ಪೊಲೀಸ್ ಠಾಣೆ ವ್ಯಾಪ್ತಿಯ ಅಹೋಕ್ ಗಂಡಕ್ ಘಾಟ್ ಕಡೆಯಿಂದ ಆಕೃತಿ ತೋಲಾ ಚೌಕಿ ಮತ್ತು ಬಿಶನ್ಪುರ ನಡುವೆ ಸಂಪರ್ಕ ಕಲ್ಪಿಸಲು 206 ಮೀಟರ್ ಸೇತುವೆಯನ್ನು ನಿರ್ಮಿಸಲಾಗಿತ್ತು. ಆದರೆ ಇದೀಗ ಉದ್ಘಾಟನೆಗೂ ಮುನ್ನ ಕುಸಿದು ಬಿದ್ದ ಪರಿಣಾಮ ದುರಂತವೊಂದು ತಪ್ಪಿದೆ.