ಜೈಶ್ರೀರಾಮ ಘೋಷಣೆ ಕೂಗಿದ ಕಾರ್ಯಕರ್ತರು: ಸಿಟ್ಟಿಗೆದ್ದ ರಾಹುಲ್ ಗಾಂಧಿ

Krishnaveni K

ಸೋಮವಾರ, 22 ಜನವರಿ 2024 (09:05 IST)
ನವದೆಹಲಿ: ಭಾರತ್ ನ್ಯಾಯ್ ಜೋಡೋ ಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಸಿಟ್ಟಿಗೆದ್ದ ಘಟನೆ ನಡೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಸ್ಸಾಂನಲ್ಲಿ ನ್ಯಾಯ್ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಾಹನಕ್ಕೆ ಕೆಲವರು ಮುತ್ತಿಗೆ ಹಾಕಿದ್ದಲ್ಲದೆ, ರಾಹುಲ್ ಪ್ರಯಾಣಿಸುತ್ತಿದ್ದ ಬಸ್ ನ್ನು ಹಿಂಬಾಲಿಸಿ ಜೈ ಶ್ರೀರಾಮ ಎಂದು ಘೋಷಣೆ ಕೂಗಿದ್ದಾರೆ.

ಇದರಿಂದ ಸಿಟ್ಟಿಗೆದ್ದ ರಾಹುಲ್ ಗಾಂಧಿ ನಾನೇ ಹೊರಗೆ ಬರ್ತೀನಿ ಎಂದು ಬಸ್ ನಿಂದಿಳಿದು ನೇರವಾಗಿ ಜನರತ್ತ ಧಾವಿಸಿದ್ದಾರೆ. ಸಿಟ್ಟಿನಲ್ಲಿ ಅವರನ್ನು ತರಾಟೆಗೆ ತೆಗೆದುಕೊಳ್ಳಲು ಪ್ರಯತ್ನಿಸಿದ್ದಾರೆ. ಈ ವೇಳೆ ನೂಕು ನುಗ್ಗಲು ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಅಸ್ಸಾಂನಲ್ಲಿ ಯಾತ್ರೆ ವೇಳೆ ರಾಹುಲ್ ಗಾಂಧಿಯವರಿಗೆ ಬಿಜೆಪಿ ಕಾರ್ಯಕರ್ತರು ಶ್ರೀರಾಮನ ಘೋಷಣೆ ಮಾಡಿ ದಾಳಿ ನಡೆಸಲು ಯತ್ನಿಸಿದ್ದಾರೆ. ರಾಹುಲ್ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಬಳಿಕ ಭದ್ರತಾ ಪಡೆ ಅಧಿಕಾರಿಗಳು ರಾಹುಲ್ ರನ್ನು ರಕ್ಷಣೆ ಮಾಡಿದ್ದಾರೆ ಎಂದು ಆರೋಪಿಸಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿಯೂ ವಾಗ್ದಾಳಿ ನಡೆಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ