ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೋಮುಗಲಭೆಗಳು ಸಂಭವಿಸಿದಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇರ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಎಚ್ಚರಿಸಿದ್ದಾರೆ.
ಆರೋಗ್ಯ, ವಿದ್ಯುತ್, ರಸ್ತೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೇರಿದಂತೆ ಹಲವಾರು ಇಲಾಖೆಗಳು ನೇರವಾಗಿ ಜನರೊಂದಿಗೆ ಸಂಪರ್ಕವಿರುವುದರಿಂದ ಆದಷ್ಟು ಬೇಗ ವ್ಯವಸ್ಥೆ ಸರಿಪಡಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆದೇಶಿಸಿದರು.