ಪ್ರಧಾನಮಂತ್ರಿ ನರೇಂದ್ರಮೋದಿ ಸಹೋದರ ರಾಮೇಶ್ವರದಲ್ಲಿ ಹೇಳಿದ್ದೇನು ಗೊತ್ತಾ?

ಮಂಗಳವಾರ, 9 ಜನವರಿ 2018 (09:10 IST)

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ರಾಮೇಶ್ವರಕ್ಕೆ ಭೇಟಿ ನೀಡಿದ್ದು, ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬಗ್ಗೆ ಹೇಳಿಕೆ ನೀಡಿದ್ದಾರೆ.

ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕುಟುಂಬ ಸಮೇತರಾಗಿ ದರ್ಶನ ಪಡೆದುಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಜನಪ್ರಿಯತೆ ಹೆಚ್ಚಾಗುತ್ತಿದ್ದು, ದೇಶದ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದಿದ್ದಾರೆ.

ಜಿಎಸ್ಟಿ ಹಾಗೂ ನೋಟ್ ಬ್ಯಾನ್ ಬಗ್ಗೆ ಪ್ರತಿಪಕ್ಷಗಳು ಅಪಪ್ರಚಾರ ನಡೆಸಿದರೂ, ಜನರು ತಿರಸ್ಕರಿಸಿದ್ದಾರೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಮೋದಿಯ ವರ್ಚಸ್ಸಿನಿಂದ ಬಿಜೆಪಿ ಗೆಲುವು ಸಾಧಿಸಿದೆ. ಮುಂದೆ ನಡೆಯುವ ಚುನಾವಣೆಗಳಲ್ಲೂ ಮೋದಿ ಅವರ ವರ್ಚಸ್ಸು ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ