ಮಕ್ಕಳಾಗಿಲ್ಲ ಎಂದು ಮಲಗಿದ್ದ ಪತ್ನಿಗೆ ಪತಿ ಮಾಡಿದ್ದೇನು ಗೊತ್ತಾ?

ಗುರುವಾರ, 16 ಜನವರಿ 2020 (06:44 IST)
ಹೈದರಾಬಾದ್ : ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಮಲಗಿದ್ದ ಪತ್ನಿಯನ್ನು ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.



ನಾಗಜ್ಯೋತಿ(26) ಕೊಲೆಯಾದ ಪತ್ನಿ, ಸೋಮಶೇಖರ್ ಕೊಲೆ ಮಾಡಿದ ಪತಿ. ಈ ದಂಪತಿಗೆ ಮಕ್ಕಳಾಗದ ಕಾರಣ ಪತಿ ಯಾವಾಗಲೂ ಪತ್ನಿಯನ್ನು ನಿಂದಿಸುತ್ತಿದ್ದ. ಇದರಿಂದ ಬೇಸರಗೊಂಡ ಪತ್ನಿ ತವರು ಮನೆ ಸೇರಿದ್ದಳು. ಆದರೆ ಈಗ ಮತ್ತೆ ಗಂಡನ ಮನೆಗೆ ವಾಪಾಸಾಗಿದ್ದಳು. ಆದರೆ ಆಕೆ ಮುಂಜಾನೆ ನಿದ್ರೆ ಮಾಡುತ್ತಿದ್ದಾಗ ಪತಿ ಆಕೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಫ್ಯಾನಿಗೆ ನೇಣು ಹಾಕಿದ್ದಾನೆ. 


ಆದರೆ ಪತ್ನಿಯ ಸಂಬಂಧಿಕರು ಅನುಮಾನಗೊಂಡು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪತಿಯನ್ನು ವಿಚಾರಣೆ ನಡೆಸಿದಾಗ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ