ಭಾರತದಲ್ಲಿ ಮುಸ್ಲಿಂರನ್ನು ಬಾಡಿಗೆದಾರರ ರೀತಿಯಲ್ಲಿ ಕಾಣಲಾಗುತ್ತಿದೆ ಎಂದು ಅಜಂಖಾನ್ ಹೇಳಿದ್ಯಾಕೆ?

ಮಂಗಳವಾರ, 12 ಮಾರ್ಚ್ 2019 (13:08 IST)
ಲಖನೌ : ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಭಾರತದಲ್ಲಿ ಮುಸ್ಲಿಂರನ್ನು ಬಾಡಿಗೆದಾರರ ರೀತಿಯಲ್ಲಿ ಕಾಣಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಹೇಳಿದ್ದಾರೆ.


ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮುಸ್ಲಿಂ ಪವಿತ್ರ ಹಬ್ಬ ರಂಜಾನ್ ಜೊತೆಗೆ ಚುನಾವಣಾ ದಿನಾಂಕ ಇದೆ. ಈ ಕುರಿತು ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಬೇಸರ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು,’ ಚುನಾವಣೆ ದಿನಾಂಕ ಬದಲಾವಣೆ ಉತ್ತಮವಾದುದ್ದಲ್ಲ ಆದರೆ, ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸುವ ಮುನ್ನವೇ ಈ ಬಗ್ಗೆ ಯೋಚಿಸಬೇಕಾಗಿತ್ತು. ಚುನಾವಣಾ ಆಯೋಗ ಈ ಬಗ್ಗೆ ಚಿಂತೆ ಮಾಡಿಲ್ಲ ಎಂಬುದು ಇದರಿಂದಲೇ ಸ್ಪಷ್ಟವಾಗುತ್ತದೆ. ರಾಜಕೀಯ ಪಕ್ಷಗಳ ಸೇರಿದಂತೆ ಎಲ್ಲರನ್ನೂ ಸಮಾನ ರೀತಿಯಲ್ಲಿ ಕಾಣಬೇಕಾಗುತ್ತದೆ.ರಂಜಾನ್ ಹಬ್ಬ ಮುಸ್ಲಿಂರಿಗೆ ಪವಿತ್ರ ಹಬ್ಬವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ