ಜೆಎನ್ಯು ಪ್ರಕರಣದಲ್ಲಿ ದೇಶದ್ರೋಹಿಗಳನ್ನು ಬೆಂಬಲಿಸುತ್ತಿದ್ದಾರೆ ಎನ್ನುವ ಆರೋಪ ಹೊತ್ತಿರುವ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ಆರೆಸ್ಸೆಸ್ ಮತ್ತು ಬಿಜೆಪಿಯಿಂದ ದೇಶಭಕ್ತಿಯ ಪಾಠ ಕಲಿಯಬೇಕಾದ ಅನಿವಾರ್ಯತೆ ನನಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಅಮೇಥಿ ಲೋಕಸಭೆ ಕ್ಷೇತ್ರದ ಸಾಲೋನ್ ಗ್ರಾಮದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್, ದ್ವಿದಳ ಧಾನ್ಯಗಳ ದರಗಳು ಮೊದಲ ಬಾರಿಗೆ ಗಗನಕ್ಕೇರಿವೆ. ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರಕಾರ ತನ್ನ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಪ್ರಧಾನಿ ಮೋದಿ ಪ್ರತಿಯೊಬ್ಬ ರೈತನಿಗೆ 15 ಲಕ್ಷ ರೂಪಾಯಿಗಳನ್ನು ನೀಡಬೇಕು. ಇಲ್ಲವಾದಲ್ಲಿ ಪ್ರಧಾನಿ ಹುದ್ದೆಯಿಂದ ತೊಲಗಬೇಕು ಎಂದು ಖಾರವಾಗಿ ನುಡಿದರು.