ನಾವು ಯಾವ ಮಟ್ಟದ ಸಂಕಷ್ಟವನ್ನು ಎದುರಿಸಿದ್ದೇವೆ ಎನ್ನುವ ಅರಿವಿಲ್ಲದ ರಾಜಕಾರಣಿಗಳು ಈ ರೀತಿಯ ಆಧಾರ ರಹಿತ ಹೇಳಿಕೆಗಳನ್ನು ನೀಡುತ್ತಾರೆ. ಜೇಟ್ಲಿಯವರ ಈ ಹೇಳಿಕೆಯಿಂದ ತೀವೃ ನೋವಾಗಿದೆ. ಮಹಿಳೆಯರಿಗೆ ರಕ್ಷಣೆಯನ್ನು ನೀಡುತ್ತೇವೆ ಎಂಬ ವಾಗ್ದಾನವನ್ನು ನೀಡಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ತಮ್ಮ ಮಾತಿಗೆ ತಕ್ಕಂತೆ ನಡೆಯಲು ಸಾಧ್ಯವಾಗದಿದ್ದರೆ, ಕೂಡಲೇ ರಾಜೀನಾಮೆಯನ್ನು ನೀಡಲಿ ಎಂದು ನಿರ್ಭಯಾ ತಂದೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಬಲಿಪಶು ಯುವತಿಯ ತಾಯಿ ಕೂಡ ಬಿಜೆಪಿ ನಾಯಕನಿಗೆ ಛೀಮಾರಿ ಹಾಕಿದ್ದಾರೆ. ಹಣಕಾಸು ಮಂತ್ರಿಯ ಜವಾಬ್ದಾರಿ ದೇಶದ ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸುವುದು, ಅದನ್ನು ಬಿಟ್ಟು ಈ ರೀತಿಯ ಹೇಳಿಕೆಗಳನ್ನು ನೀಡುವುದಲ್ಲ ಎಂದಿರುವ ಅವರು ನಮ್ಮ ಭಾವನೆಗಳ ಜತೆ ಚೆಲ್ಲಾಟವಾಡಬೇಡಿ ಎಂದು ದೇಶದ ರಾಜಕಾರಣಿಗಳಲ್ಲಿ ಮನವಿ ಮಾಡಿದ್ದಾರೆ.