ಧ್ವನಿವರ್ಧಕಗಳೆಲ್ಲಾ ಶಾಲೆ, ಆಸ್ಪತ್ರೆಗಳಿಗೆ ದಾನ : ಯೋಗಿ!

ಸೋಮವಾರ, 23 ಮೇ 2022 (09:59 IST)
ಲಕ್ನೋ : ಉತ್ತರ ಪ್ರದೇಶದ ಮಸೀದಿಗಳಲ್ಲಿ ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡಲಾಗಿದೆ ಇನ್ನೂ ಹಲವೆಡೆ ಇದರ ಸಹವಾಸವೇ ಬೇಡ ಎಂದು ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಹೇಳಿದ್ದಾರೆ.

ತೆಗೆದ ಧ್ವನಿವರ್ಧಕಗಳನ್ನು ಶಾಲೆ, ಆಸ್ಪತ್ರೆಗಳಿಗೆ ನೀಡಲಾಗುತ್ತಿದೆ ಎಂದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಾರಪತ್ರಿಕೆಗಳಾದ ಆರ್ಗನೈಸರ್ ಮತ್ತು ಪಾಂಚಜನ್ಯ 75 ವರ್ಷಗಳನ್ನು ಪೂರೈಸಿದ ಕುರಿತು ಆನ್ಲೈನ್ನಲ್ಲಿ ಆಯೋಜಿಸಿದ್ದ ಮಾಧ್ಯಮ ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯನಾಥ್, “ಚುನಾವಣೆ ಮುಗಿದ ನಂತರ ಹಲವು ರಾಜ್ಯಗಳಲ್ಲಿ ಗಲಭೆಗಳು ನಡೆದಿವೆ.

ಚುನಾವಣೆ ವೇಳೆ ಅಥವಾ ನಂತರ ಉತ್ತರ ಪ್ರದೇಶದಲ್ಲಿ ಯಾವುದೇ ಗಲಭೆ ನಡೆದಿಲ್ಲ. ಇದೇ ಉತ್ತರಪ್ರದೇಶದಲ್ಲಿ ಈ ಹಿಂದೆ ಸಣ್ಣಪುಟ್ಟ ವಿಚಾರಗಳಿಗೆ ಗಲಭೆಗಳು ನಡೆಯುತ್ತಿದ್ದವು.

ರಾಜ್ಯದಲ್ಲಿ ಬಿಡಾಡಿ ಪ್ರಾಣಿಗಳ ಸಮಸ್ಯೆಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಹಲವು ಕ್ರಮಗಳನ್ನು ಪ್ರಸ್ತಾಪಿಸಿದರು. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರಾ ಕೇಂದ್ರಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ