ವರದಕ್ಷಿಣೆ : ವಾಟ್ಸಾಪ್ನಲ್ಲೇ ತಲಾಖ್! ಮುಂದೇನಾಯ್ತು?

ಭಾನುವಾರ, 24 ಜುಲೈ 2022 (08:01 IST)
ಲಕ್ನೋ : ಹುಡುಗಿ ಮನೆಯವರು ವರದಕ್ಷಿಣೆ ಕೊಡಲಿಲ್ಲವೆಂದು ಮದುವೆಯಾದ ಮರುದಿನವೇ ಪತ್ನಿಗೆ ವಾಟ್ಸಾಪ್ನಲ್ಲೇ ತ್ರಿವಳಿ ತಲಾಖ್ ನೀಡಿ ನವ ವರ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನ ಖೋಡಾ ಪ್ರದೇಶದಲ್ಲಿ ನಡೆದಿದೆ.

ನವ ವರನ ಮನೆಯವರು ವರದಕ್ಷಿಣೆಯಾಗಿ ಕಾರು, 2 ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣಗಳಿಗೆ ಬೇಡಿಕೆಯಿಟ್ಟಿದ್ದರು. ಆದರೆ ಹುಡುಗಿ ಮನೆಯವರು ವರದಕ್ಷಿಣೆ ಕೊಡಲು ನಿರಾಕರಿಸಿದ್ದರಿಂದಾಗಿ ಪತಿಯು ವಾಟ್ಸಾಪ್ನಲ್ಲಿಯೇ ತ್ರಿವಳಿ ತಲಾಖ್ ನೀಡಿ ಪರಾರಿಯಾಗಿದ್ದಾನೆ.

ಇದರಿಂದ ಗಾಬರಿಗೊಂಡ ನವ ವಧು ಮನೆಯವರು ತಕ್ಷಣವೇ ಆರೋಪಿ ವಿರುದ್ಧ ಖೋಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಖೋಡಾ ಪೊಲೀಸರು ಆರೋಪಿ ಪತ್ತೆಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಶೀಘ್ರದಲ್ಲೇ ಬಂಧಿಸಿ, ಕಠಿಣ ಶಿಕ್ಷೆ ಕೊಡಿಸುವುದಾಗಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ