ರಾಜ್ಯಸಭೆಗೆ ಡಾ.ಡಿ ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ: ಮೋದಿ
ವೀರೇಂದ್ರ ಹೆಗ್ಗಡೆ ಅವರನ್ನು ಸಮಾಜ ಸೇವೆ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಪಿ.ಟಿ.ಉಷಾ ಅವರನ್ನು ಕ್ರೀಡಾ ಕ್ಷೇತ್ರದಿಂದ, ವಿಜಯೇಂದ್ರ ಪ್ರಸಾದ್ ಅವರನ್ನು ಸಿನಿಮಾ ಕ್ಷೇತ್ರದಿಂದ ಹಾಗೂ ಇಳಯರಾಜಾ ಅವರನ್ನು ಸಂಗೀತ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಯ್ಕೆಯಾದ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ. ಅಲ್ಲದೆ, ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ.