ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ವರ್ಷಗಳ ಅಧಿಕಾರವಧಿಯನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು, ಭ್ರಷ್ಟಾಚಾರವನ್ನು ಬೇರುಮಟ್ಟದಿಂದ ನಿರ್ಮೂಲನೆಗೊಳಿಸಿ, ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ಬದ್ಧ ಎಂದು ಘೋಷಿಸಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಹೆಸರಿಸದೆ, ದೇಶದ ಪ್ರಮುಖ ವಿಪಕ್ಷ ಕೇವ ಲ ಅಭಿವೃದ್ಧಿಗೆ ತಡೆಯೊಡ್ಡಲು ಬಯಸುತ್ತಿದೆ. ಆದರೆ, ಜನತೆ ಸತ್ಯಾಸತ್ಯತೆಯನ್ನು ಅರಿತು ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದರು.