ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಡಿಸೆಂಬರ್ 1ರಂದು ಚುನಾವಣೆ

ಬುಧವಾರ, 11 ನವೆಂಬರ್ 2020 (11:38 IST)
ಬೆಂಗಳೂರು : ಡಿಸೆಂಬರ್ 1ಕ್ಕೆ ಅಶೋಕ್ ಗಸ್ತಿ ನಿಧನದಿಂದ ತೆರವಾಗಿದ್ದ ರಾಜ್ಯಸಭಾ 1 ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಎಲ್ಲಾ ರಾಜಕೀಯ ಪಕ್ಷಗಳಿಗೆ ನ.18ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ.ಹಾಗೇ  ನ.23ರಂದು ನಾಮಪತ್ರ ವಾಪಾಸ್ ಗೆ ಕೊನೆ ದಿನವಾಗಿದೆ.

ಡಿಸೆಂಬರ್ 1ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಸಂಜೆ 5 ಗಂಟೆಯಿಂದ ಮತ ಎಣಿಕೆ ಕಾರ್ಯನಡೆಸಲಾಗುವುದು ಎಂಬುದಾಗಿ ತಿಳಿದುಬಂದಿದೆ.. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ