1995 ರ ಬ್ಯಾಚ್ ಪೊಲೀಸ್ ಅಧಿಕಾರಿಯಾಗಿರುವ ಕರ್ನಾಟಕ ಮೂಲದ ನಾಯಕ್ ಅವರನ್ನು ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ವಿರೋಧಿ ಅಧಿಕಾರಿಗಳು 2006ರಲ್ಲಿ ಬಂಧಿಸಿದ್ದರು. ಮಾಜಿ ಪತ್ರಕರ್ತ ಕೇತನ್ ತಿರೋಡ್ಕರ್ ನಾಯಕ್ ವಿರುದ್ಧ ಅಕ್ರಮ ಆಸ್ತಿ ಆರೋಪವನ್ನು ಮಾಡಿದ್ದರು. ಸುಮಾರು ಆರುವರೆ ವರ್ಷಗಳ ಕಾಲ ಅಮಾನತಿನಲ್ಲಿದ್ದ ಅವರು ಸುಪ್ರೀಂ ಕೋರ್ಟ್ ಅವರ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ ಬಳಿಕ 2012ರ ಪುನಃ ಸೇವೆಗೆ ಸೇರ್ಪಡೆಯಾಗಿದ್ದರು.