ಸಂಜೆ ತುರ್ತು ವಿಚಾರಣೆ, ನ್ಯಾ. ಅಭಿಜಿತ್ ಗಂಗೋಪಾಧ್ಯಾಯ ಆದೇಶಕ್ಕೆ ತಡೆ?

ಶನಿವಾರ, 29 ಏಪ್ರಿಲ್ 2023 (06:47 IST)
ನವದೆಹಲಿ : ಬಹಳ ಅಪರೂಪದ ಬೆಳವಣಿಗೆಯೊಂದರಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ಸಂಜೆ ದಿಢೀರ್ ವಿಚಾರಣೆ ನಡೆಸಿ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.

ತಾನು ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದ ವರದಿ ಮತ್ತು ಸುಪ್ರೀಂ ಆದೇಶದ ಅಧಿಕೃತ ಪ್ರತಿಯನ್ನು ರಾತ್ರಿ 12:15ರ ಒಳಗಡೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್ಗೆ ಹೈಕೋರ್ಟ್ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಆದೇಶಿಸಿದ್ದರು.

ಈ ಆದೇಶ ಪ್ರಕಟವಾದ ಬೆನ್ನಲ್ಲೇ ಸುಪ್ರೀಂ ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಹಿಮಾ ಕೊಹ್ಲಿ ಅವರ ಪೀಠವು ಸಂಜೆ ತುರ್ತು ವಿಚಾರಣೆ ನಡೆಸಿ ಹೈಕೋರ್ಟ್ನ ಆದೇಶವು ಅಸಮರ್ಪಕ ಮತ್ತು ನ್ಯಾಯಾಂಗ ಶಿಸ್ತಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟು ಆದೇಶಕ್ಕೆ ತಡೆ ನೀಡಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ