ಸಾರಿಕಾ ಸಂಸದ ರಾಜಯ್ಯ ಅವರ ಪುತ್ರ ಅನಿಲ್ ಅವರನ್ನು 2002ರಲ್ಲಿ ಪ್ರೇಮ ವಿವಾಹವಾಗಿದ್ದರು. ಬಳಿಕ ತನ್ನ ಮಾವ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಈ ಹಿಂದೆಯೂ ಕೂಡ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಇಂದು ಮೂರನೇ ಬಾರಿಗೆ ಆತ್ಮಹತ್ಯೆಗೆ ಯತ್ನಿಸಿದ ಸಾರಿಕಾ ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ತಿಳಿದ ವಾರಂಗಲ್ ನಗರ ಠಾಣೆ ಪೊಲೀಸರು, ಸಂಸದರ ನಿವಾಸಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಇದೇ ವೇಳೆ ಮಾವ ಎಸ್.ರಾಜಯ್ಯ, ಅತ್ತೆ ಮಾಧವಿ ಹಾಗೂ ಪತಿ ಅನಿಲ್ ಮೂವರನ್ನೂ ಬಂಧಿಸಿ ಎಲ್ಲರ ವಿರುದ್ಧ ವರದಕ್ಷಿಣೆ ಕಿರುಕುಳ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.