ಕೇಂದ್ರ ಜವಳಿ ಖಾತೆ ಸಚಿವ ಸ್ಮೃತಿ ಇರಾನಿ ಚುನಾವಣೆ ಸಂದರ್ಭದಲ್ಲಿ ನಕಲಿ ಶೈಕ್ಷಣಿಕ ದಾಖಲೆಗಳನ್ನು ನೀಡಿದ್ದಾರೆ ಎನ್ನುವ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಇರಾನಿಗೆ ನೋಟಿಸ್ ನೀಡಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ದೆಹಲಿ ಹೈಕೋರ್ಟ್ ಮುಂದಿನ ತಿಂಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರವಿಂದರ್ ಸಿಂಗ್ ಇಂದು ನೋಟಿಸ್ ನೀಡಬೇಕಾಗಿದ್ದು, ಆದರೆ, ನೋಟಿಸ್ ಸಿದ್ದವಾಗಿಲ್ಲವಾದ್ದರಿಂದ ಮುಂದಿನ ಆಕ್ಟೋಬರ್ 1 ರಂದು ನೋಟಿಸ್ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.