ಇವರು ಉದ್ಯೋಗ ನಿಮಿತ್ತ ಹೈದರಾಬಾದ್ಗೆ ತೆರಳಿ ಕಳೆದ ಐದು ವರ್ಷಗಳಿಂದಲೂ ಕೂಡ ಅಲ್ಲಿಯೇ ನೆಲೆಸಿದ್ದರು. ಆದರೆ ಇತ್ತೀಚೆಗೆ ದಂಪತಿಯ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು ಎನ್ನಲಾಗಿದ್ದು, ಇದರಿಂದ ಬೇಸತ್ತ ಮಹಿಳೆ ತನ್ನ ಪುಟ್ಟ ಮಗುವಿನ ಎದುರಿಗೇ ಮೊದಲು ಪತಿಯನ್ನು ನೇಣಿಗೇರಿಸಿ ಬಳಿಕ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಪೊಲೀಸರು, ಪ್ರಕರಣವು ಕಳೆದ ಎರಡು ದಿನಗಳ ಹಿಂದೆಯೇ ನಡೆದಿದ್ದು, ಎರಡು ದಿನಗಳಿಂದಲೂ ಕೂಡ ಆಚೆಗೆ ಬಂದೇ ಇಲ್ಲ ಎಂದು ಅನುಮಾನಗೊಂಡು ಮನೆಯ ಮಾಲೀಕರು ಎಚ್ಚೆತ್ತ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲದೆ ಪ್ರಕರಣ ಹಿನ್ನೆಲೆಯಲ್ಲಿ ಮಗು ಕಳೆದ ಎರಡು ದಿನಗಳಿಂದಲೂ ಕೂಡ ಮೃತ ದೇಹಗಳ ನಡುವೆಯೇ ಕುಳಿತು ಅಳುತ್ತಿತ್ತು. ಪ್ರಸ್ತುತ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಇದೇ ವೇಳೆ, ಮಂಜುನಾಥ್ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಮೀನಾ ಬಟ್ಟೆ ಅಂಗಡಿಯೊಂದರಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಮೃತ ಮಹಿಳೆ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಡೆತ್ ನೋಟ್ನ್ನೂ ಕೂಡ ಬರೆದಿದ್ದು, ಅದರಲ್ಲಿ ಮನೆಯವರಿಗೆಲ್ಲರಿಗೂ ನಮ್ಮಿಂದ ಮೋಸವಾಗಿದೆ. ಅದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.