ಮಹಾರಾಷ್ಟ್ರ ಹಾಗೂ ಹರಿಯಾಣ ಸೋಲಿನ ನಂತರ ಕಾರ್ಯಕರ್ತರಲ್ಲಿ ಪ್ರಿಯಾಂಕ ಗಾಂಧಿ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆ ತನ್ನಿ ಎಂಬ ಕೂಗು ಹೆಚ್ಚುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕಳೆದ ಲೋಕಸಭಾ ಚುನಾವಣೆಯ ಸೋಲಿನ ನಂತರ ಪಕ್ಷಕ್ಕೆ ನಾನು ಹಲವು ಸಲ ಪ್ರಿಯಾಂಕ ಗಾಂಧಿ ಅವರನ್ನು ಸಕ್ರಿಯವಾಗಿ ರಾಜಕಾರಣಕ್ಕೆ ತನ್ನಿ ಎಂದು ಹೇಳಿದ್ದೆ ಆದರೆ ಪಕ್ಷ ಈ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ ಎಂದರು.
ಇದೇ ವೇಳೆ, ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಮತದಾರರು ಬಿಜೆಪಿಗೆ ಜೈ ಎಂದಿದ್ದು, ಇದು ಮೋದಿ ಅಲೆಯಿಂದಲ್ಲ. ಆಡಳಿತ ವೈಫಲ್ಯದಿಂದಾಗಿ ಮತದಾರರು ಬಿಜೆಪಿಗೆ ಮತ ಹಾಕಿದ್ದಾರೆ ಎಂದರು. ಕಳೆದ ಲೋಕಸಭಾ ಚುನಾವಣೆ ನರೇಂದ್ರ ಮೋದಿ ಅವರ ಅಲೆ ಇತ್ತು ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ ಆದರೆ ಅದೇ ಅಲೆ ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ಇಲ್ಲ. ಆದರೆ ಬಿಜೆಪಿ ನಾಯಕರು ಎರಡು ವಿಧಾಸನಭೆ ಚುನಾವಣೆಯಲ್ಲೂ ಮೋದಿ ಅಲೆಯಿಂದಲೇ ಗೆಲವು ಸಾಧಿಸಲು ಸಾಧ್ಯವಾಯಿತು ಎಂಬುದು ಸುಳ್ಳು ಎಂದರು.