ಪಕ್ಷ ಸೇರ್ಪಡೆ ನಂತರ ಮಾತನಾಡಿದ ಅಂತಾರಾಷ್ಟ್ರೀಯ ಕ್ರಿಕೆಟಿಗ ವಿಜಯ್ ಭಾರದ್ವಾಜ್, "ನಾನು ನರೇಂದ್ರ ಮೋದಿ ಅಭಿಮಾನಿ. ಈ ಕಾರಣದಿಂದ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ನನಗಿದು ಖುಷಿ ತಂದಿದೆ. ಮೋದಿ ದೇಶಕ್ಕಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ದೇಶದ ಜನರಲ್ಲಿ ಭರವಸೆಯನ್ನು ಹುಟ್ಟಿಸಿದ್ದಾರೆ. ಅವರ ಮುಂದಾಳತ್ವದ ಸರ್ಕಾರ ಭ್ರಷ್ಟಾಚಾರದಿಂದ ದೂರವಿದೆ. ಆರೋಪಗಳಿಲ್ಲದೆ ಅತ್ಯುತ್ತಮ ಕೆಲಸ ಮಾಡ್ತಿದ್ದಾರೆ", ಎಂದಿದ್ದಾರೆ.