i
ಬುಧವಾರ ಪ್ರಕಟವಾಗಿರುವ ಮಾಧ್ಯಮಗಳ ವರದಿಯ ಪ್ರಕಾರ, ಮನೆ ತೊರೆದು ಹೋಗಿ ಉಗ್ರ ಸಂಘಟನೆಯ ಸದಸ್ಯರಾಗಿ ಗುರುತಿಸಿಕೊಂಡಿರುವ ನಾಲ್ಕು ಜನ ಯುವಕರ ಕುಟುಂಬದ ಸದಸ್ಯರು ಸರ್ಕಾರವನ್ನು ಸಂಪರ್ಕಿಸಿ ತಮ್ಮ ಮಕ್ಕಳಿಗೆ ತಪ್ಪಿನ ಅರಿವಾಗಿದೆ. ಅವರು ಭಯೋತ್ಪಾದಕ ಸಂಘಟನೆಯನ್ನು ತ್ಯಜಿಸಿ ದೇಶಕ್ಕೆ ಮರಳಿ ಹೊಸ ಬದುಕು ಪ್ರಾರಂಭಿಸುವ ಮನೋಭಿಲಾಷೆ ಹೊಂದಿದ್ದಾರೆ ಎಂದು ಹೇಳಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ಮಾಹಿತಿ ನೀಡಿವೆ.